ಬೆಂಗಳೂರು: ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಅತ್ಯಾಚಾರ ಪ್ರಕರಣದಲ್ಲಿ ಜನತಾ ದಳ (ಜಾತ್ಯತೀತ) ನಾಯಕ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಈ ಪ್ರಕರಣದ ಸಂಬಂಧ ನಾಳೆ ತೀರ್ಪು ಪ್ರಕಟಿಸಲಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ಮನೆ ಕೆಲಸದವಳ ಮೇಲೆ ಅತ್ಯಾಚಾರ ಸಂಬಂಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ವಾದ-ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ದೋಷಿ ಎಂಬುದಾಗಿ ತೀರ್ಪು ನೀಡಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ಎನ್ನುವಂತೆ ಆಗಿದೆ.
ಇನ್ನೂ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವಂತ ಪ್ರಕರಣದಲ್ಲಿ ಇಂದು ದೋಷಿ ಎಂಬುದಾಗಿ ತೀರ್ಪು ನೀಡಿರುವಂತ ಕೋರ್ಟ್, ನಾಳೆ ಈ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.
Karnataka | Expelled JDS Leader and former Lok Sabha MP Prajwal Revanna convicted by the Special Court for People's Representatives in connection with a rape case of a domestic worker at a farmhouse in Holenarasipura in Hassan district
— ANI (@ANI) August 1, 2025




