ಬೆಂಗಳೂರು ಜನತೆ ಗಮನಕ್ಕೆ: ಡಿ.21ರಿಂದ 10 ದಿನ ಸುಮ್ಮನಹಳ್ಳಿಯ ವಿದ್ಯುತ್ ಚಿತಾಗಾರ ಸ್ಥಗಿತ

ಬೆಂಗಳೂರು: ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ತುರ್ತ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ ದಿನಾಂಕ: 21-12-2024 ರಿಂದ 30-12-2024 (10 ದಿನಗಳು) ವರೆಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.

ಮುಂದುವರಿದು, ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಪೀಣ್ಯ, ಮೇಡಿ ಅಗ್ರಹಾರ ಅಥವಾ ಕೆಂಗೇರಿ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದಾಗಿರುತ್ತದೆ ಎಂದು ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ.