ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯ ರಾವ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ಗುರುವಾರ ವಜಾಗೊಳಿಸಿದ ನಂತರ ಅವರು ನ್ಯಾಯಾಂಗ ಬಂಧನದಲ್ಲಿ ಮುಂದುವರಿಯಲಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.

ಮಾರ್ಚ್ 14 ರಂದು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಜಾಮೀನು ಕೋರಿಕೆಯನ್ನು ತಿರಸ್ಕರಿಸಿದ ನಂತರ ಇದು ಬಂದಿದೆ. ರನ್ಯಾ ಮೊದಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಯಿತು.

ಎರಡೂ ಕೆಳ ನ್ಯಾಯಾಲಯಗಳು ನಟಿ ರನ್ಯಾ ರಾವ್ ಜಾಮೀನು ನಿರಾಕರಿಸಿರುವುದರಿಂದ, ರಾವ್ ಅವರ ಕಾನೂನು ತಂಡವು ಈಗ ಹೈಕೋರ್ಟ್ಗೆ ಹೋಗಲು ತಯಾರಿ ನಡೆಸುತ್ತಿದೆ. ಇದು ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆಯ ಅಂತಿಮ ಆಯ್ಕೆಯಾಗಿದೆ.