ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ದಿನಾಂಕ 11-06-2025ರಂದು ಮಾವಲಿ ವ್ಯಾಪ್ತಿಯ ಹಳ್ಳಿಗಳಲ್ಲಿ ಹಾಗೂ ದಿನಾಂಕ 13-06-2025ರಂದು ಚಂದ್ರಗುತ್ತಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಕರೆಂಟ್ ಕಟ್ ಆಗಲಿದೆ.
ಈ ಬಗ್ಗೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 11-06-2025ರ ನಾಳೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮಾವಲಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವಂತ ಹರೂರು, ಕೋಲ್ಗುಣಸಿ, ಮನ್ಮನೆ, ಗೇರುಕೊಪ್ಪ, ಮಾವಲಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ.
ಇನ್ನೂ ದಿನಾಂಕ 13-06-2025ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಚಂದ್ರಗುತ್ತಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವಂತ ಬಾಡದಬೈಲು, ಅಂದವಳ್ಳಿ, ಕತವಾಯಿ, ಚಂದ್ರಗುತ್ತಿ ಟೌನ್, ಕಲಗೋಡು, ಚನ್ನಪಟ್ಟಣ, ಹುಲ್ತಿಕೊಪ್ಪ, ಹರೀಶಿ ಹಾಗೂ ಕೋಡಂಬಿ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.




